ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್ ಬೆಂಬಲಿಗರಿಂದಲೇ ಧಿಕ್ಕಾರ ಕೂಗಿ ಆಕ್ರೋಶ… ಮೈಸೂರು,ಫೆಬ್ರವರಿ,26,2021(..):ಶಾಸಕ ತನ್ವೀರ್ ಸೇಠ್ ಗೆ ಕೆಪಿಸಿಸಿಯಿಂದ ನೋಟಿಸ್ ನೀಡುವ ವಿಚಾರ ಕುರಿತು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೇ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಆಕೋಶ ವ್ಯಕ್ತಪಡಿಸಿದ್ದಾರೆ. ಶಾಸಕ ತನ್ವೀರ್ ಸೆಠ್ ಮನೆ ಮುಂದೆ ಜಮಾಯಿಸಿದ ನೂರಾರು ಅಭಿಮಾನಿಗಳು, ಸಿದ್ಧರಾಮಯ್ಯ ಹಾಗೂ ಪಕ್ಷದ ನಾಯಕರ ವಿರುದ್ಧವೇ ಧಿಕ್ಕಾರದ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆಪಿಸಿಸಿಯಿಂದ ನೋಟಿಸ್ ವಿಚಾರಕ್ಕೆ ಗರಂ ಆಗಿರುವ ಅಭಿಮಾನಿಗಳನ್ನು ಸಮಾದಾನಪಡಿಸಲು ಶಾಸಕ ತನ್ವಿರ್ ಸೇಠ್ ಮುಂದಾದರು. : - - -- - -