“ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ” : ಸಚಿವ ರಾಜನಾಥ್‌ ಸಿಂಗ್ ಬೆಂಗಳೂರು,ಫೆಬ್ರವರಿ,26,2021(..) :ಬಾಲಾಕೋಟ್ ವೈಮಾನಿಕದಾಳಿಗೆ 2ವರ್ಷ ತುಂಬಿದ ಈ ದಿನದಂದು, ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಗೆ ನನ್ನ ನಮನ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಟ್ವೀಟ್ ಮಾಡಿದ್ದಾರೆ. ಬಾಲಾಕೋಟ್ ದಾಳಿಯ ಯಶಸ್ಸು ಭಯೋತ್ಪಾದನೆ ವಿರುದ್ಧದ ಭಾರತದ ಬಲವಾದ ಇಚ್ಚಾಶಕ್ತಿಯನ್ನು ತೋರಿಸುತ್ತದೆ. ಭಾರತವನ್ನು ಸುರಕ್ಷಿತವಾಗಿರಿಸಿರುವ ಸಶಸ್ತ್ರಪಡೆಗಳ ಬಗ್ಗೆ ಹೆಮ್ಮೆಯಾಗುತ್ತದೆ ಎಂದು ಮೆಚ್ಚುಗೆವ್ಯಕ್ತಪಡಿಸಿದ್ದಾರೆ. : - -----