“ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗೋಕಾಕಗೆ‌ ಮೋಸ್ಟ್ ವೆಲ್ ಕಮ್” : ಸಚಿವ ರಮೇಶ ಜಾರಕಿಹೊಳಿ ಬೆಂಗಳೂರು,ಫೆಬ್ರವರಿ,13,2021(..) :ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು ಎಂಬುದು ನಮ್ಮ ಗುರಿ. ಲಕ್ಷ್ಮೀ ಹೆಬ್ಬಾಳ್ಕರ್ ಗೆ ಗೋಕಾಕಗೆ‌ ಮೋಸ್ಟ್ ವೆಲ್ ಕಮ್ ಎಂದು ಸಚಿವ ರಮೇಶ ಜಾರಕಿಹೊಳಿ ಸ್ವಾಗತಕೋರಿದ್ದಾರೆ.ಹೆಬ್ಬಾಳ್ಕರ್ ಮೈಂಡ್ ಔಟ್ ಆಗಿದ್ದಾರೆ. ಹೀಗಾಗಿ, ಸಚಿವ ರಮೇಶ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದರೆ ಗೋಕಾಕದಿಂದ ಸ್ಪರ್ಧೆ ಮಾಡುತ್ತೇನೆ ಎಂಬ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದರಿಂದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಕಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ಕಿಡಿಕಾರಿದ್ದಾರೆ. : -- ---