“ತರಳಬಾಳು ಹುಣ್ಣಿಮೆ ಮಹೋತ್ಸವ ಒಂದು ವರ್ಷ ಮುಂದಕ್ಕೆ” ಬೆಂಗಳೂರು,ಫೆಬ್ರವರಿ,12,2021(..) :ಬಳ್ಳಾರಿ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 19 ರಿಂದ 27ರವರೆಗೆ ನಡೆಯಬೇಕಿದ್ದ ಸಿರಿಗೆರೆ ತರಳಬಾಳು ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಒಂದು ವರ್ಷ ಮುಂದೂಡಲಾಗಿದೆ.ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೊನಾ ಕಾರಣದಿಂದ ತರಳಬಾಳು ಹುಣ್ಣಿಮೆ ಮಹೋತ್ಸವ ಮುಂದೂಡುವುದು ಅಗತ್ಯವಾಗಿದೆ.9 ದಿನಗಳ ಕಾಲ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಸಾವಿರಾರು ಜನ ಭಾಗಿಯಾಗುತ್ತಾರೆ. ಭಕ್ತರ ಆರೋಗ್ಯದ ಮೇಲೆ ದುಷ್ಟರಿಣಾಮ ಉಂಟಾಗಬಾರದು ಎನ್ನುವ ಉದ್ದೇಶದಿಂದ ಮಹೋತ್ಸವ ಮುಂದೂಡಲಾಗಿದೆ ಎಂದು ಹೇಳಿದ್ದಾರೆ. : - ----