“ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುತ್ತೇವೆ” : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರು,ಫೆಬ್ರವರಿ,11,2021(..): ಕರಾವಳಿ, ಮಲೆನಾಡು, ಹಳ್ಳಕೊಳ್ಳಗಳು, ತೀರ್ಥಕ್ಷೇತ್ರಗಳು, ಸಾಂಸ್ಕೃತಿಕ ಮತ್ತು ಪಾರಂಪರಿಕ ಆಕರ್ಷಣೆಗಳನ್ನು ಹೊಂದಿರುವ ರಾಜ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ನಾವು ಎಲ್ಲ ರೀತಿಯ ನೆರವು ನೀಡುತ್ತೇವೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸವ್ಯಕ್ತಪಡಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಸಚಿವ ಸಿ.ಪಿ.ಯೋಗೇಶ್ವರ್ ಅವರು ದೆಹಲಿಯಲ್ಲಿಂದು ನನ್ನೊಂದಿಗೆ ಚರ್ಚಿಸಿದರು ಎಂದು ಟ್ವೀಟ್ ಮಾಡಿದ್ದಾರೆ. : ------ - -..