ಸೆಲೆಬ್ರೆಟಿಗಳ ಟ್ವೀಟ್ ಅನ್ನು ದೇಶದ ವಿರುದ್ಧ ಎಂದು ಬಿಂಬಿಸಲಾಗುತ್ತಿದೆ : ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾರೆಡ್ಡಿ ಬೆಂಗಳೂರು,ಫೆಬ್ರವರಿ,06,2021(..): ರೈತರ ಪ್ರತಿಭಟನೆ ಬೆಂಬಲಿಸಿ ಅಂತಾರಾಷ್ಟ್ರೀಯ ಸೆಲೆಬ್ರೆಟಿಗಳು ಟ್ವೀಟ್ ಮಾಡುತ್ತಿದ್ದಾರೆ. ದೇಶದ ವಿರುದ್ಧ ಆರೋಪ ಮಾಡುತ್ತಿಲ್ಲ. ಆದರೆ, ದೇಶದ ವಿರುದ್ಧ ಎಂದು ಬಿಂಬಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಕೇಂದ್ರ ಕೃಷಿ ಕಾಯ್ದೆ ತಿದ್ದುಪಡಿ ವಿರುದ್ಧ ಆಕ್ರೋಶವ್ಯಕ್ತಪಡಿಸಿದ ಅವರು, ದೆಹಲಿಯ ರೈತರ ಹೋರಾಟ ಬೆಂಬಲಿಸಿ ಅಂತಾರಾಷ್ಟ್ರೀಯ ಸೆಲೆಬ್ರೆಟಿಗಳು ಟ್ವೀಟ್ ಮಾಡುತ್ತಿದ್ದಾರೆ.ಅದು ದೇಶದ ವಿರುದ್ಧವಲ್ಲ. ಕೂಡಲೇ ಕೃಷಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. : - ----- -