ಮೂವರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಪ್ರಸ್ತಾಪ ಅಂಗೀಕಾರ… ನವದೆಹಲಿ,ಫೆಬ್ರವರಿ,5,2021(..):ಓರ್ವ ವಕೀಲರು ಮತ್ತು ಇಬ್ಬರು ನ್ಯಾಯಾಂಗ ಅಧಿಕಾರಿಗಳನ್ನ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಉನ್ನತೀಕರಿಸುವ ಪ್ರಸ್ತಾಪವನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಅಂಗೀಕರಿಸಿದೆ. ವಕೀಲರಾದ ಆದಿತ್ಯ ಸೋಂಧಿ, ನ್ಯಾಯಾಂಗ ಅಧಿಕಾರಿಗಳಾದ ರಾಜೇಂದ್ರ ಬಾದಾಮಿಕರ್, ಖಾಜಿ ಜಯಾಬುನ್ನಿಸ ಮೊಹಿಯುದ್ದೀನ್ ಅವರನ್ನ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಉನ್ನತೀಕರಿಸುವ ಪ್ರಸ್ತಾಪವನ್ನು ಫೆಬ್ರವರಿ 4 ರಂದು ನಡೆದ ಸಭೆಯಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಂಗೀಕರಿಸಿದೆ. : - –- – - -