“ಪ್ರಧಾನಿಯವರ ಮಧ್ಯಸ್ಥಿಕೆಯಲ್ಲಿ ಮಹದಾಯಿ ಸಮಸ್ಯೆ ಬಗೆಹರಿಸಲಿ” : ಸತೀಶ್ ಜಾರಕಿಹೊಳಿ ಒತ್ತಾಯ ಬೆಂಗಳೂರು,ಜನವರಿ,31,2021(..): ಪ್ರಧಾನಿಯವರು ಮಧ್ಯಸ್ಥಿಕೆವಹಿಸಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಮಹದಾಯಿ ಸಮಸ್ಯೆ ಬಗೆಹರಿಸಿ, ನ್ಯಾಯಯುತವಾಗಿ ಸಿಗಬೇಕಾದ ನೀರು ಸಿಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಮಹದಾಯಿ ಬಗ್ಗೆ ಗೋವಾ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೇಂದ್ರದಲ್ಲಿ, ಗೋವಾ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮುತುವರ್ಜಿ ವಹಿಸಬೇಕು ಎಂದರು. ಮಹದಾಯಿ ವಿವಾದವನ್ನು ಬಗೆಹರಿಸಲು ಮುಂದಾಗಬೇಕು. ಗೋವಾ ಮುಖ್ಯಮಂತ್ರಿ ಮನವೊಲಿಸುವ ಪ್ರಯತ್ನವನ್ನು ಮಾಡಬೇಕು. ಇಂತಹ ಅವಕಾಶ ಮತ್ತೆ ಸಿಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. : ’----- -