“ಇನ್ನೊಂದು ಪಕ್ಷ ಇದ್ದಿದ್ದರೆ ವಿಶ್ವನಾಥ್ ಇಷ್ಟೊತ್ತಿಗೆ ಕರ್ಚೀಫ್ ಇಲ್ಲವೇ ಟವೆಲ್ ಹಾಕಿರುತ್ತಿದ್ದರು” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆ ಬೆಂಗಳೂರು,ಜನವರಿ,31,2021(..) :ವಿಶ್ವನಾಥ್ ಅವರಿಗೆ ಮೂರು ಪಕ್ಷಗಳು ಮುಗಿಯಿತು. ಇನ್ನೊಂದು ಪಕ್ಷ ಇದ್ದಿದ್ದರೆ ಇಷ್ಟೊತ್ತಿಗೆ ಕರ್ಚೀಫ್ ಇಲ್ಲವೇ ಟವೆಲ್ ಹಾಕಿರುತ್ತಿದ್ದರು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಕಾಂಗ್ರೆಸ್, ಜೆಡಿಎಸ್ ಮುಗಿಯಿತು. ಈಗ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿರುವ ಅವರು ಇನ್ನು ಯಾವ ಪಕ್ಷ ಸೇರುತ್ತಾರೊ?, ಕಾದು ನೋಡೋಣ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ವ್ಯಂಗ್ಯಮಾಡಿದ್ದಾರೆ.ಸಾಹಿತಿ ಕೋಟಾದಲ್ಲಿ ವಿಧಾನಪರಿಷತ್ ಸದಸ್ಯರಾಗಿರುವ ಅವರು ಸಾಹಿತ್ಯದ ಪರಿಭಾಷೆಯಲ್ಲಿಯೇ ವಿರೋಧಿಗಳನ್ನು ಟೀಕಿಸುತ್ತಾರೆ. ಅವರ ವಿರುದ್ಧ ಹೆಚ್ಚು ಮಾತಾಡೊಲ್ಲ ಎಂದು ತಿಳಿಸಿದರು. : ------ --- -..