ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚಿಸಿದ ಎಂಎಲ್ ಸಿ ಬಸವರಾಜ ಹೊರಟ್ಟಿ … ಬೆಂಗಳೂರು,ಜನವರಿ,27,2021(..):ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಸಭಾಪತಿ ಸ್ಥಾನದ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ಸಿಎಂ ಬಿಎಸ್ ವೈ ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂಎಲ್ ಸಿ ಬಸವರಾಜ ಹೊರಟ್ಟಿ, ಹೆಚ್.ಡಿ ದೇವೇಗೌಡರ ಸೂಚನೆ ಮೇರೆಗೆ ಸಿಎಂ ಭೇಟಿಯಾಗಿದ್ದೇನೆ. ಸಿಎಂ ಜತೆ ಸಭಾಪತಿ ಸ್ಥಾನದ ಬಗ್ಗೆ ಚರ್ಚೆ ನಡೆಸಿದ್ದೇನೆ. ಎಂಎಲ್ ಸಿ ಗಳ ಜತೆ ಸಭೆ ನಡೆಸಿ ಚರ್ಚಿಸುವುದಾಗಿ ಸಿಎಂ ಬಿಎಸ್ ವೈ ಭರವಸೆ ನೀಡಿದ್ದಾರೆ ಎಂದರು. : - - - - .