ಮೈಸೂರಿನ ಸುತ್ತೂರು ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ….. ಮೈಸೂರು,ಜನವರಿ,25,2021(..):ಮೈಸೂರಿನ ಸುತ್ತೂರು ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಭಾವಿ ಅಳಿಯ ಅರ್ಮರ್ಥ್ಯ ಸಿದ್ದಾರ್ಥ್ ಜೊತೆ ಆಗಮಿಸಿದ ಡಿ.ಕೆ ಶಿವಕುಮಾರ್ ಶ್ರೀಗಳನ್ನ ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು. ಇದೆ ವೇಳೆ ಭಾವಿ ಅಳಿಯನನ್ನ ಶ್ರೀಗಳಿಗೆ ಪರಿಚಯಿಸಿದರು. ಮಗಳ ಮದುವೆ ಲಗ್ನಪತ್ರಿಕೆ ನೀಡಲು ಡಿಕೆ ಶಿವ ಕುಮಾರ್ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಇನ್ನು ಶ್ರೀಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತ್ಯೇಕ ಮಾತುಕತೆ ನಡೆಸಿದರು. : - –- -