ಜಿಲೆಟಿನ್ ಸ್ಪೋಟ ದುರಂತ ಬಗ್ಗೆ ಸಿಬಿಐ ತನಿಖೆ ನಡೆಸಲಿ- ಸಿಎಂಗೆ ಮಾಜಿ ಶಾಸಕ ಪ್ರಸನ್ನ ಕುಮಾರ್ ಮನವಿ ಬೆಂಗಳೂರು,ಜನವರಿ,23,2021(..) :ಗಣಿ ದುರಂತದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಮಾಜಿ ಶಾಸಕ ಪ್ರಸನ್ನ ಕುಮಾರ್ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು.ನೆನ್ನೆ ನಡೆದ ಜಿಲೆಟಿನ್ ಸ್ಪೋಟ ಸಂಬಂಧಿಸಿದಂತೆ ಶಿವಮೊಗ್ಗಕ್ಕೆ ಆಗಮಿಸಿದ ಸಿಎಂ ಬಿ.ಎಸ್.ವೈ ಅವರನ್ನು ಭೇಟಿ ಮಾಡಿದ ಅವರು ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಈ ಕುರಿತು ಪ್ರತಿಕ್ರಿಯಿಸಿ, ಮೊದಲು ಸ್ಥಳ ಪರಿಶೀಲನೆ ನಡೆಸಲಾಗುವುದು. ಬಳಿಕ ತನಿಖೆ ಕುರಿತತಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಧಿಕಾರಿಗಳಿಂದ ಮಾಹಿತಿ ಪಡೆದರಲ್ಲದೇ, ಮೃತರ ಕುಟುಂಬಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. : -- - - -