‘ಬಸವ ಭವನ’ ಲೋಕಾರ್ಪಣೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ… ಮೈಸೂರು,ಜನವರಿ,23,2021(..): ವಿಜಯನಗರ 1ನೇ ಹಂತದಲ್ಲಿ ನಿರ್ಮಾಣವಾಗಿರುವ ಬಸವ ಭವನವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಹೆಬ್ಬಾಳು, ವಿಜಯನಗರ ಬಸವ ಸಮಿತಿಯಿಂದ ಐದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, 500 ಜನ ಕೂರಬಹುದಾದ ಸಭಾಂಗಣ ಒಳಗೊಂಡಂತೆ 300 ಮಂದಿ ಕೂರುವ ಭೋಜನ ಶಾಲೆ ಇದೆ. ಸುತ್ತೂರು ಶ್ರೀ ದೇಶಿಕೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ತನ್ವೀರ್ ಸೇಠ್ ಬಸವ ಸಮಿತಿ ಅಧ್ಯಕ್ಷ ಬಸವರಾಜು ಸೇರಿ ಅನೇಕರು ಭಾಗವಹಿಸಿದ್ದರು. : - - ..