ಪಡಿತರ ಕಾರ್ಡುದಾರರಿಗೆ ಜೋಳ ರಾಗಿ ಸಿಗುವಂತೆ ಮಾಡುತ್ತೇವೆ- ಆಹಾರ ಸಚಿವ ಉಮೇಶ್ ಕತ್ತಿ…. ಬೆಂಗಳೂರು,ಜನವರಿ,21,2021(..):ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಪಡೆದ ಸಚಿವ ಉಮೇಶ್ ಕತ್ತಿ ಇದೀಗ ಪಡಿತರ ಕಾರ್ಡುದಾರರಿಗೆ ಸಿಹಿಸುದ್ಧಿ ನೀಡಿದ್ದಾತೆ. ಪಡಿತರ ಚೀಟಿದಾರರಿಗೆ ಜೋಳ, ರಾಗಿ ಸಿಗುವಂತೆ ಮಾಡುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. : - - - -.