ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ರನ್ನ ಅಭಿನಂದಿಸಿದ ಮಾಜಿ ಸಿಎಂ ಸಿದ್ದರಾಮಯ್ಯ… ಬೆಂಗಳೂರು,ಜನವರಿ,21,2021(..):ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾದ ಮಾಜಿ ಸಂಸದ ಆರ್.ಧೃವನಾರಾಯಣ್ ರನ್ನ ಮಾಜಿ ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾದ ಮಾಜಿ ಸಂಸದ ಧ್ರುವ ನಾರಾಯಣ್ ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಇದೆ ವೇಳೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಬಾಲರಾಜು, ಜಯಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಕಾಂಗ್ರೆಸ್ ಮುಖಂಡ ರವಿಶಂಕರ್ ಕೂಡ ಉಪಸ್ಥಿತರಿದ್ದರು. ನಿನ್ನೆಯಷ್ಟೇ ಆರ್. ಧೃವನಾರಾಯಣ್ ಮತ್ತು ರಾಮಲಿಂಗರೆಡ್ಡಿ ಅವರನ್ನ ಕೆಪಿಸಿಸಿ ನೂತನ ಕಾರ್ಯಧ್ಯಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿತ್ತು. : - –-. .