ಖಾತೆ ಬದಲಾವಣೆ ಬಗ್ಗೆ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದ್ದು ಹೀಗೆ…? ಬೆಂಗಳೂರು,ಜನವರಿ,21,2021(..):ಸಚಿವ ಸಂಪುಟ ವಿಸ್ತರಣೆ ಮಾಡಿದ ನಂತರ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಇನ್ನು 10 ಮಂದಿ ಸಚಿವರ ಖಾತೆ ಅದಲು ಬದಲು ಮಾಡಿದ್ದಾರೆ ಎನ್ನಲಾಗಿದೆ. ಖಾತೆ ಬದಲಾವಣೆ ಮಾಡಿದ್ದಕ್ಕೆ ಕೆಲ ಸಚಿವರು ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಈ ವಿಚಾರದಲ್ಲಿ ನಾನು ಸಿಎಂ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. : - –- -.