“ಧರಣಿ ನಿರತರ ಮೇಲೆ ದೌರ್ಜನ್ಯ ಖಂಡನೀಯ” : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಜನವರಿ,20,2021(..): ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದಾರೆ. ಧರಣಿ ನಿರತರ ಮೇಲೆ ದೌರ್ಜನ್ಯ ಮಾಡಲಾಗುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದರು. ಫ್ರೀಡಂ ಪಾರ್ಕ್ ನಿಂದ ರಾಜಭವನದತ್ತ ತೆರಳುತ್ತಿದ್ದ ರೈತರ ಪ್ರತಿಭಟನಾ ರ್ಯಾಲಿಯನ್ನು ಪೊಲೀಸರು ತಡೆದಿದ್ದಕ್ಕೆ ಕಿಡಿಕಾರಿದ ಅವರು, ರಾಜ್ಯ ಸರ್ಕಾರವು ಪ್ರತಿಭಟನಾಕಾರರನ್ನು ದೌರ್ಜನ್ಯದ ಮೂಲಕ ತಡೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ಪ್ರಜಾತಂತ್ರ ವ್ಯವಸ್ಥೆ ಮೇಲೆ ನಂಬಿಕೆಯಿಲ್ಲ ಎಂದಿದ್ದಾರೆ. :----- -