ಕಾಂಗ್ರೆಸ್ ರಾಜಭವನ ಚಲೋಗೆ ತಡೆ: ಧರಣಿನಿರತ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು…. ಬೆಂಗಳೂರು,ಜನವರಿ,20,2021(..):ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನ ಬೆಂಬಲಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋಗೆ ಪೊಲೀಸರು ತಡೆಯೊಡ್ಡಿದ್ದಾರೆ. ರೈತರ ಹೋರಾಟ ಬೆಂಬಲಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ಫ್ರೀಡಂಪಾರ್ಕ್ ನಿಂದ ರಾಜಭವನದಲ್ಲಿ ತೆರಳುತ್ತಿದ್ದ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ಮಹಾರಾಣಿ ಕಾಲೇಜು ಬಳಿ ತಡೆದಿದ್ದಾರೆ. ಇನ್ನು ಪ್ರತಿಭಟನಾನಿರತ ಕಾರ್ಯಕರ್ತರು ರೈತರನ್ನ ಪೊಲೀಸರು ಬಿಎಂಟಿಸಿ ಬಸ್ ಗೆ ಹತ್ತಿಸಿ ಬೇರೆಕಡೆ ಸ್ಥಳಾಂತರ ಮಾಢುತ್ತಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. …. . : , , . 20, 2021 (..): . ’ . .. . . .. . . .: / / .. / / : – - – -