ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ… ಉಡುಪಿ,ಜನವರಿ, 19,2021(..): ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನ ಸರ್ಕಾರ ಜಾರಿ ಮಾಡಿದ್ದು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಸ ಹಂಚಿಕೊಂಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದು ಸಮಾಧಾನ ತಂದಿದೆ. ಗೋಹತ್ಯೆ ನಿಷೇಧ ಮಹಾತ್ಮಾ ಗಾಂಧೀಜಿ ಅವರ ಕನಸಾಗಿತ್ತು. ಹೀಗಾಗಿ ಇದೀಗ ನಾವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿ ಕನಸು ನನಸಾಗಿಸಿದ್ದೇವೆ ಎಂದರು. : - – – - .