ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ…. ಬೆಂಗಳೂರು,ಜನವರಿ,18,2021(..):ಸಚಿವ ಸಂಪುಟಕ್ಕೆ 7 ಮಂದಿ ನೂತನ ಸಚಿವರು ಸೇರ್ಪಡೆಯಾಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಆದರೆ ಖಾತೆ ಹಂಚಿಕೆ ಇನ್ನೂ ಅಂತಿಮವಾಗಿಲ್ಲ. ಹೀಗಾಗಿ ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಎರಡು ಮೂರು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಇಂದು ಉಡುಪಿಗೆ ತೆರಳುತ್ತಿದ್ದೇನೆ. ಉಡುಪಿಯಿಂದ ಬಂದ ಬಳಿಕ ಸಭೆ ಮಾಡುತ್ತೇನೆ. ಹಿರಿಯರ ಜತೆ ಚರ್ಚಿಸಿ ನಂತರ ಖಾತೆ ಹಂಚಿಕೆ ಮಾಡುತ್ತೇನೆ ಎಂದು ತಿಳಿಸಿದರು. ಇನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಉದ್ಧವ್ ಠಾಕ್ರೆ ಹೇಳಿಕೆಯನ್ನ ಖಂಡಿಸುತ್ತೇನೆ. ಅವರು ಮಾಡುವ ತಂಟೆ ತಕರಾರನ್ನು ಖಂಡಿಸುತ್ತೇನೆ. ಒಂದೇ ಒಂದು ಅಡಿ ಜಾಗ ಕೊಡುವ ಪ್ರಶ್ನೆಯೇ ಇಲ್ಲ ಎಂದರು. : - – -- .