“ಏಪ್ರಿಲ್ ಬಳಿಕ ಯಡಿಯೂರಪ್ಪನನ್ನು ತೆಗೆಯುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು,ಜನವರಿ,17,2021(..): ಏಪ್ರಿಲ್ ಬಳಿಕ ಯಡಿಯೂರಪ್ಪ ನನ್ನು ತೆಗೆಯುತ್ತಾರೆ. ನನಗೆ ಆರ್ ಎಸ್ ಎಸ್ ಮೂಲಗಳಿಂದ ಮಾಹಿತಿ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.ಮಾಧ್ಯಮದವರೊಂದಿಗೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಂದುವರೆಯುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೇನೂ ತೆಗೆಯುತ್ತೇನೆಂದು ಹೇಳುವುದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. ಯಾವುದೇ ಪಾರ್ಟಿಯ ಹೈಕಮಾಂಡ್ ಆದರೂ, ತೆಗೆಯುತ್ತೇನೆಂದು ಹೇಳಲ್ಲ. ಹೈಕಮಾಂಡ್ ತೆಗೆಯುತ್ತೇನೆ ಎಂದರೆ ಸರ್ಕಾರ ನಡೆಯುತ್ತಾ? ಕೆಲಸ ಮಾಡೋವುದಕ್ಕೆ ಆಗುತ್ತಾ? ಅವರು ಆ ರೀತಿ ಹೇಳಬಹುದು ಆದರೆ ನನಗಿರುವ ಮಾಹಿತಿ ಬೇರೆ ಎಂದಿದ್ದಾರೆ. :----- -