“ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ, ಬೈಕ್ ಸವಾರ ಸಾವು” ಮೈಸೂರು,ಜನವರಿ,13,2021(..): ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಐ ಇ ಕಾಲೇಜು ಬಳಿ ತಡ ರಾತ್ರಿ ಅಪಘಾತ ನಡೆದಿದೆ. ಮೈಸೂರು ಹೊರಹೊಲಯದ ಶಿವಪುರದ ನಿವಾಸಿ ಸಂತೋಷ್ (33) ಮೃತ ದುರ್ದೈವಿ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ಓವರ್ ಟೆಕ್ ಮಾಡಿಕೊಂಡು ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ. :--–--