ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ಗೆ ಬೆಂಕಿ: ನಾಲ್ವರು ಸಾವು… ಚೆನ್ನೈ, ಜನವರಿ 12,2021(..):ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ತಂಜಾವೂರಿನ ತಿರುವೈಯಾರು ಬಳಿ ಈ ಘಟನೆ ನಡೆದಿದೆ. ಮಂಗಳವಾರ ಟ್ರಕ್ ಒಂದನ್ನು ಖಾಸಗಿ ಬಸ್ ಹಿಂದಿಕ್ಕುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಈ ಅನಾಹುತ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ಹತ್ತು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಖಾಸಗಿ ಬಸ್ ಕಲ್ಲಾನೈನಿಂದ ತಂಜಾವೂರು ಮೂಲಕ ಮಾರಿಗುಡಿಗೆ ಸಾಗುತ್ತಿತ್ತು. ವರಗೂರು ಸಮೀಪದಲ್ಲಿ ಟ್ರಕ್ ಒಂದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಪೈಪ್‌ಗಳಿಗಾಗಿ ತೋಡಲಾಗಿದ್ದ ಗುಂಡಿಯೊಂದಕ್ಕೆ ಇಳಿಸಿದ. ಆಗ ಮೇಲಿನ ವಿದ್ಯುತ್ ಕೇಬಲ್‌ಗಳು ಬಸ್‌ಗೆ ತಗುಲಿ ವಿದ್ಯುತ್ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. – - - – .