ದರ್ಶನ್ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದು ಇಲ್ಲಿದೆ… ಬೆಂಗಳೂರು, ಜನವರಿ 04, 2020 (..):ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದು ಹೊರಬಿದ್ದಿದೆ. ರಾಜವೀರ ಮದಕರಿ ಸಿನಿಮಾದ ಶೂಟಿಂಗ್ ಡೇಟ್ ಫಿಕ್ಸ್ ಆಗಿದೆ ಎಂಬ ವಿಷಯವೇ ಸಾಕಷ್ಟು ಸೆನ್ಸೆಷನ್ ಕ್ರಿಯೇಟ್ ಮಾಡಿದೆ. ಸಂಕ್ರಾಂತಿ ಹಬ್ಬಕ್ಕೆ ಡಿಬಾಸ್ ರಾಜವೀರ ಮದಕರಿ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಕೊರೊನಾ ಸೋಂಕಿಗೆ ವ್ಯಾಕ್ಸಿನ್ ಬಂದಿರೋದ್ರಿಂದ ಸಂಕ್ರಾಂತಿ ಹಬ್ಬಕ್ಕೆ ಶೂಟಿಂಗ್ ಮಾಡಲು ಭರ್ಜರಿ ತಯಾರಿ ನಡೆಸಲಾಗಿದೆಯಂತೆ.