ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಶುಭಾಶಯ…! ಬೆಂಗಳೂರು,ಜನವರಿ,01,2021(..): ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ ಪಾಲನೆ ಮರೆಯದಿರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಇಂದಿನಿಂದ 10 ಮತ್ತು 12ನೇ ತರಗತಿಗಳು ನಡೆಯಲಿದ್ದು, 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಪುನರಾರಂಭಗೊಳ್ಳಲಿದೆ. ಮಕ್ಕಳ ಸುರಕ್ಷತೆಗೆ ಎಲ್ಲ ಸಿದ್ಧತೆ ನಡೆಸಿದ್ದು, ಕಡ್ಡಾಯ ಮಾಸ್ಕ್ ಧರಿಸಿ, ಭೌತಿಕ ಅಂತರ, ಸ್ವಚ್ಛತೆ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. … , . 01, 2020 (..): .. . , . ’ , .: / : - ---- ..-…!