ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು,ಡಿಸೆಂಬರ್,27,2020(..): ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ. ಯಾರು ಖರ್ಗೆ ಹೆಸರು ತಿರಸ್ಕಾರ ಮಾಡಿದವರ ಹೆಸರು ಹೇಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.ಖರ್ಗೆ ಸಿಎಂ ಆಗುವ ಅವಕಾಶ ಇತ್ತು ಎಂಬ ದೇವೇಗೌಡರ ಹೇಳಿಕೆ ಸಿದ್ದರಾಮಯ್ಯ ತಿರುಗೇಟು. ದೇವೇಗೌಡರನ್ನ ಹೆಸರು ಹೇಳಲಿ ಅಂತ ಸವಾಲು ಹಾಕಿದರು. ನಾನಂತು ಖರ್ಗೆ ಹೆಸರು ತಿರಸ್ಕಾರ ಮಾಡಿಲ್ಲ. ಯಾರು ಮಾಡಿದ್ರು ಅಂತ ನನಗೆ ಗೊತ್ತಿಲ್ಲ. ಅವರಿಗೆ ಗೊತ್ತಿದ್ರೆ ಹೆಸರು ಹೇಳಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. : ’-- --’ - -