ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ವಿಚಾರ: ಸರ್ಕಾರದ ನಿರ್ಧಾರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ವ್ಯಂಗ್ಯ ಮೈಸೂರು,ಡಿಸೆಂಬರ್,23,2020(..): ನಾಳೆಯಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ವ್ಯಂಗ್ಯವಾಡಿದ್ದಾರೆ. ರಾತ್ರಿ ಮಾತ್ರ ಎಚ್ಚರವಾಗಿರೋಕೆ ಕೊರೊನಾ ಗೂಬೆನಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಇದು ಹಾಸ್ಯವಾಗಿ ಕಂಡರು ನನ್ನಲ್ಲಿ ದಿಗಿಲು ಹುಟ್ಟಿಸಿದೆ. ಸಾಕಷ್ಟು ಅರ್ಥಿಕ ನಷ್ಟ ಅನುಭವಿಸಿದ್ದೇವೆ. ಈಗಷ್ಟೆ ಚೇತರಿಸಿಕೊಳ್ಳುತ್ತಿದ್ದೇವೆ. ಆದರೆ ಸರ್ಕಾರ ಬೇಜವಾಬ್ದಾರಿ ರೀತಿ ನಡೆದುಕೊಳ್ಳುತ್ತಿದೆ‌ ಎಂದಿದ್ದಾರೆ, : - - - ’ -