ಗಾಂಧಿವಾದವು ಹೆಚ್ಚು ಪ್ರಸ್ತುತವಾಗುತ್ತಿರುವುದು ಸಂತೋಷ : ಹಿರಿಯ ಗಾಂಧಿ ಮಾರ್ಗಿ ಕೆ.ಟಿ.ವೀರಪ್ಪ ಮೈಸೂರು,ಡಿಸೆಂಬರ್,23,2020(..) :ಭಾರತದ ಯುವ ಜನಾಂಗ ಗಾಂಧಿ ವಿಚಾರಧಾರೆಗಳಿಂದ ದೂರಸರಿದು. ಪಾಶ್ಚಿಮಾತ್ಯ ಸಂಸ್ಕೃತಿಯ ದಾಸನೂದಾಸರಾಗಲು ಪರಿತಪಿಸುತ್ತಿರುವ ಸಂದರ್ಭದಲ್ಲಿ ಗಾಂಧಿವಾದವು ಹೆಚ್ಚು ಪ್ರಸ್ತುತವಾಗುತ್ತಿರುವುದು ಸಂತೋಷದ ಮತ್ತು ಅಚ್ಚರಿಯ ವಿಷಯ ಎಂದು ಹಿರಿಯ ಗಾಂಧಿ ಮಾರ್ಗಿ ಕೆ.ಟಿ.ವೀರಪ್ಪ ಹೇಳಿದರು.ಮೈಸೂರು ವಿಶ್ವವಿದ್ಯಾನಿಲಯ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಮಾನಸಗಂಗೋತ್ರಿ ವಿಜ್ಞಾನಭವನದಲ್ಲಿ ಬುಧವಾರ ಆಯೋಜಿಸಿದ್ದ ‘’ಭಾರತದಲ್ಲಿ ಗಾಂಧಿ ಮತ್ತು ಅವರ ಸಮಕಾಲೀನರು’’ ವಿಷಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ್ ನಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ಗಾಂಧೀಜಿಯವರದು ನೇರ ನಡೆ, ನುಡಿಯಾಗಿದ್ದು, ಸ್ವಚ್ಛತೆಗೆ ಹೆಚ್ಚು ಆಧ್ಯತೆ ನೀಡಿದ್ದರು. ಮನುಕುಲಕದ ಒಳಿತಿಗಾಗಿ ಸದಾ ಚಿಂತಿಸುತ್ತಿದ್ದರು. ಗಾಂಧಿ ಅವರ ಕುರಿತ 450ಕ್ಕೂ ಹೆಚ್ಚು ಗ್ರಂಥಗಳು ಪ್ರಪಂಚದ ಎಲ್ಲಾ ಸಾಹಿತ್ಯದಲ್ಲಿ ರೂಪುಗೊಂಡಿವೆ ಎಂದರು. ಸತ್ಯ, ಅಹಿಂಸೆ, ಶಿಕ್ಷಣ, ಖಾದಿ, ಚರಕ, ಕರಕುಶಲ ಕಲೆ ಎಲ್ಲರ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಗಾಂಧಿ ಬಯಸಿದ್ದರು. ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರಗಳು ಸುಧಾರಿಸಬೇಕು ಎಂದಿದ್ದರು. ಅವರ ಚಿಂತನೆಗಳು ಅನೇಕ ಸಮಸ್ಯೆಗಳಿಗೆ ಪರಿಹಾರವಾಗಿದ್ದು, ಮತ್ತೆ, ಮತ್ತೆ ಅವರ ವಿಚಾರಧಾರೆಗಳ ಮೂಲಕ ಹತ್ತಿರವಾಗುತ್ತಿದ್ದಾರೆ ಎಂದು ಸ್ಮರಿಸಿದರು. ಗಾಂಧಿ ಮತ್ತು ಅವರ ವಿಚಾರಧಾರೆಗಳನ್ನು ಅರ್ಥಮಾಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕತೆ ತೋರಬೇಕಿದೆ. ಈ ನಿಟ್ಟಿನಲ್ಲಿ ಗಾಂಧಿ ಭವನವು ಬಹಳ ಶ್ಲಾಘನೀಯ ಕಾರ್ಯವನ್ನು ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಷ್ಟ್ರ ಮಟ್ಟದ ವೆಬಿನಾರ್ ಗೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ಪ್ರೊ.ಕಾಳಚೆನ್ನೇಗೌಡ, ದೇವನೂರು ಬಸವರಾಜು, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಎಂ.ಎಸ್.ಶೇಖರ್ ಇತರರು ಉಪಸ್ಥಿತರಿದ್ದರು. … : .. , . 23, 2020 (..): “ ,” .. , . “ ,” , . , , “ . . 450 . . .”: / .. / / : -------..