ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಬಳ್ಳಾರಿ,ಡಿಸೆಂಬರ್,17,2020(..): ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಮೋದಿ. ಹೇಳಿದ್ದು ಒಂದು, ಈಗ ಮಾಡ್ತಾ ಇರೋದು ಒಂದು. ಪ್ರಧಾನಿ ನರೇಂದ್ರ ಮೋದಿ ಆಧುನಿಕ‌ ಭಸ್ಮಾಸುರ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಟೀಕಿಸಿದ್ದಾರೆ.ಸುದ್ದಿಗಾರರ ಜೊತೆಗೆ ಮಾತನಾಡುತ್ತ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದ ಅವರು, ಈಗ ಇರೋ ಉದ್ಯೋಗಗಳು ಕೂಡ ಹೋಗುತ್ತಿದೆ. ನಿವ್ವಳ ದೇಶೀಯ ಉತ್ಪನ್ನ(ಜಿಡಿಪಿ) ಕುಸಿದಿದೆ ಅಂಥ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದರು. : - ----- ..