ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಭೆ ; ಕೆ.ಲಕ್ಷಣ್, ನಳಿನ್ ಕುಮಾರ್ ಕಟೀಲ್ ಚಾಲನೆ ಮೈಸೂರು,ಡಿಸೆಂಬರ್,16,2020(..): ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಭೆಗೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷಣ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ನಗರದ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ಸಭೆಗೆ ಗೋವುಗಳಿಗೆ ಪೂಜೆ ಸಲ್ಲಿಸಿ ಅಕ್ಕಿ, ಬೆಲ್ಲ ತಿನ್ನಿಸುವ ಮೂಲಕ ಚಾಲನೆ ನೀಡಿ, ಬಳಿಕ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನರೇಂದ್ರ ಬಾಬು, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಎಂಎಲ್ಸಿ ಹೆಚ್.ವಿಶ್ವನಾಥ್, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಸೇರಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು. :------- ., -