ತಮ್ಮ ರಾಜಕೀಯ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್… ಬೆಂಗಳೂರು,ಡಿಸೆಂಬರ್,8,2020(..):ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿರುವುದಾಗಿ ಹರಡಿದ್ದ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂಬುದು ಕೇವಲ ವದಂತಿ. ರಾಜಕೀಯ ನಿವೃತ್ತಿ ಬಗ್ಗೆ ನಾನೇ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ನನ್ನನ್ನ ಈ ಮಟ್ಟಕ್ಕೆ ಬೆಳೆಸಿದ ಜನರು ನಿರ್ಧಾರ ತೆಗೆದುಕೊಳ್ಳಬೇಕಿದೆ. ಏಕೆಂದರೇ ನಾನು ಜನರ ಪ್ರೀತಿ ಬಂಧನದಲ್ಲಿರುವೆ ಎಂದಿದ್ದಾರೆ. ನನ್ನ ರಾಜಕೀಯ ನಿವೃತ್ತಿ ಬಗ್ಗೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಆಗಲ್ಲ. ಜನರು ನಿರ್ಧರಿಸಬೇಕು ಎಂದು ರಮೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ಸಕ್ರಿಯ ರಾಜಕಾರಣಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಹರಡಿತ್ತು. : - - - - .