ರೈತರ ಹೋರಾಟಕ್ಕೆ ನಟ ಶಿವಣ್ಣನ ಬೆಂಬಲ… ಬೆಂಗಳೂರು,ಡಿಸೆಂಬರ್,8,2020(..):ನೂತನ ಕೃಷಿಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದು ಇಂದು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ಸಂಘಟನೆಗಳು ಸಾಥ್ ನೀಡಿವೆ. ಇನ್ನು ಭಾರತ್ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ರೈತರ ಪ್ರತಿಭಟನೆ ಕಿಚ್ಚು ಹೆಚ್ಚಾಗಿದೆ. ಈ ಮಧ್ಯೆ ರೈತರ ಹೋರಾಟಕ್ಕೆ ನಟ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೌದು, ಈ ಕುರಿತು ಟ್ವೀಟ್ ಮಾಡಿರುವ ನಟ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ, ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳುವ ಮೂಲಕ ರೈತರ ಹೋರಾಟವನ್ನ ಬೆಂಬಲಿಸಿದ್ದಾರೆ. ಕೇಂದ್ರದ ನೂತನ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಬೆಂಬಲಿಸಿ ರಾಜ್ಯ ರಾಜಧಾನಿ ಬೆಂಗಳೂರು, ಕೋಲಾರ, ಧಾರವಾಡ, ಮೈಸೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಬೀದಿಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. , . 8, 2020 (..): , ’ . , , “ , , , . .”: / : - –-