ಕುಮಾರಸ್ವಾಮಿ ಅವರಿಗೆ ಅಧಿಕಾರವೇ ಅಂತಿಮ ಗುರಿ : ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ಮೈಸೂರು,ಡಿಸೆಂಬರ್,06,2020(..): ಕುಮಾರಸ್ವಾಮಿ ಅವರಿಗೆ ಅಧಿಕಾರವೇ ಅಂತಿಮ ಗುರಿ. ಇದಕ್ಕಾಗಿ ಇವರು ಏನನ್ನಾದರೂ ಕೂಡಾ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ಸೆಕ್ಯುಲರ್ ವ್ಯಾಮೋಹದಿಂದ ಕಾಂಗ್ರೆಸ್ ಸೇರಿ ಕೆಟ್ಟೆ ಎಂಬ ಹೆಚ್ಡಿಕೆ ಹೇಳಿಕೆಗೆ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದು, ಎಚ್.ಡಿ.ಕುಮಾರಸ್ವಾಮಿ ಹೇಳಿಕೆಯು ಜಾತ್ಯಾತೀತ ಜನತಾದಳ ಎಂಬ ಪಕ್ಷದ ಹೆಸರಿಗೇ ಕಳಂಕಪ್ರಾಯ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಇವರನ್ನು ಗಂಭೀರವಾಗಿ ತೆಗೆದುಕೊಂಡರೆ ಭ್ರಮ ನಿರಸವಾಗುತ್ತದೆ ಅಷ್ಟೇ. ಹೆಚ್ಡಿಕೆ ಅಂತವರು ಸೆಕ್ಯುಲರ್ ಎನ್ನುವುದಕ್ಕೂ ಕಮ್ಯುನಲ್ ಎನ್ನುವುದಕ್ಕೂ ಅಂತಹ ದೊಡ್ಡ ವ್ಯತ್ಯಾಸ ಏನಿಲ್ಲ ಎಂದು ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. : ---- -..