ಡಿ.೯ ರಂದು “ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ” ಕುರಿತು ವಿಚಾರಸಂಕಿರಣ ಮೈಸೂರು,ಡಿಸೆಂಬರ್,05,2020(..): ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದಿಂದ ಡಿ.೯ ರಂದು “ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ” ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ತರಬೇತುದಾರ ಕೃಷ್ಣಕುಮಾರ್ ಹೇಳಿದರು. ಈ ಕುರಿತು ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದ್ದಾರೆ. ಮೈಸೂರು ವಿವಿ ಕುಲಪತಿ ಪ್ರೊ.ಜಿ ಹೇಮಂತ್ ಕುಮಾರ್ ಅವರಿಂದ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಅಂತರಾಷ್ಟ್ರೀಯ ಮಟ್ಟದ ಈಜುಗಾರ್ತಿ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತೆ ‘ಶುಭ ಚಿತ್ತರಂಜನ್ ‘ ಅವರು ಉಪನ್ಯಾಸ ನೀಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಾಧ್ಯಾಪಕ ಡಾ.ಕೃಷ್ಣೇಗೌಡ ಇದ್ದರು. : 09-”----- ”--