ನಾಳೆ ಒತ್ತಾಯಪೂರ್ವಕವಾಗಿ ಬಂದ್ ಮಾಡಲ್ಲ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ… ಬೆಂಗಳೂರು,ಡಿಸೆಂಬರ್,4,2020(..):ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಮಧ್ಯೆ ನಾಳೆ ಒತ್ತಾಯಪೂರ್ವಕವಾಗಿ ಬಂದ್ ಮಾಡಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ. ನಾಳಿನ ಬಂದ್ ಬಗ್ಗೆ ಪ್ರತಿಕ್ರಿಯಿಸಿರುವ ಟಿಎ ನಾರಾಯಣಗೌಡ, ನಾಳಿನ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ. ಆದರೆ ಯಾವುದೇ ಒತ್ತಾಯಪೂರ್ವಕವಾಗಿ ಬಂದ್ ಮಾಡಲ್ಲ. ಇನ್ನು ನಾಳೆ ನಡೆಯುವ ರ್ಯಾಲಿಯಲ್ಲಿ ಪಾಲ್ಗೊಳ್ಳಲ್ಲ. ಆದರೆ ಕನ್ನಡ ಹೋರಾಟದಲ್ಲಿ ಒಮ್ಮತವಿಲ್ಲ ಎಂದು ತಿಳಿಯಬಾರದು. ಹೀಗಾಗಿ ಬಂದ್ ಗೆ ಬೆಂಬಲ ನೀಡಿದ್ದೇವೆ ಎಂದರು. : - -- - - –