ಡಿಸಿ ರೋಹಿಣಿ ಸಿಂಧೂರಿ ಮತ್ತು ಜನಪ್ರತಿನಿಧಿಗಳ ನಡುವಿನ ವಾಕ್ಸಮರ: ಜನಸ್ಪಂದನಾ ಕಾರ್ಯಕ್ರಮವನ್ನೇ ರದ್ದುಗೊಳಿಸಿದ ಸಚಿವ ಆರ್ ಅಶೋಕ್.. ಮೈಸೂರು,ನವೆಂಬರ್,30,2020(..):ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಜನಪ್ರತಿನಿಧಿಗಳ ನಡುವಿನ ಮಾತಿನ ಸಮರ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕಂದಾಯ ಸಚಿವ ಆರ್.ಅಶೋಕ್ ಜನಸ್ಪಂದನಾ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಅಶೋಕ್. ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು ತಿಳಿಸಿದ್ದೇನೆ ಎಂದು ತಿಳಿಸಿದರು. ಈಗ ಜನಸ್ಪಂದನ ಕಾರ್ಯಕ್ರಮ ಇರುವುದಿಲ್ಲ. ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ದಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲಗಳನ್ನು ಕೇಳಲಾಗುತ್ತದೆ. ಈ ಬೆಳವಣಿಗೆಯಿಂದ ಸಾರ್ವಜನಿಕರಿಗೆ ಅನಾನೂಕೂಲವಾಗಿದೆ. ಇದನ್ನು ನಾನು ಒಪ್ಪುತ್ತೇನೆ ಆದರೆ ಇಂದಿನಿಂದ ಅದು ಆಗುವುದಿಲ್ಲ ಎಂದು ಆರ್.ಅಶೋಕ್ ತಿಳಿಸಿದರು. … . , . 30, 2020 (..): . . , . . .“ . . . ,” .: ./ / : - – - - - – .