ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯಗೆ ಕನಸು ಬಿದ್ದಿದ್ದು ಯಾವಾಗ..? – ಶಾಸಕ ಎಂ. ಪಿ. ರೇಣುಕಾಚಾರ್ಯ ಟಾಂಗ್… ಬೆಂಗಳೂರು, ನವೆಂಬರ್ 26,2020(..):ಬಿ.ಎಸ್ ಯಡಿಯೂರಪ್ಪ ಬಹಳ ದಿನ ಮುಖ್ಯಮಂತ್ರಿಗಳಾಗಿ ಇರುವುದಿಲ್ಲ. ದೆಹಲಿಯಿಂದ ನನಗೆ ಸಿಕ್ಕಿರುವ ಮಾಹಿತಿಯ ಪ್ರಕಾರವೇ ಹೇಳುತ್ತಿದ್ದೇನೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯಗೆ ಯಡಿಯೂರಪ್ಪ ಬದಲಾವಣೆ ಕನಸು ಬಿದ್ದಿದ್ದು ಯಾವಾಗ?” ಎಂದು ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಸಿಎಂ ಯಡಿಯೂರಪ್ಪ ಬದಲಾವಣೆ ಕನಸು ಯಾವಾಗ ಬಿತ್ತು?. ಹಗಲುಗನಸೋ, ಇರುಳಗನಸೋ? ಹೇಳಲಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. : –-- - - .