ಹೆರಿಗೆ ಮಾಡಿಸಲು ಚುನಾವಣಾ ಪ್ರಚಾರ ಮೊಟಕುಗೊಳಿಸಿದ ಅಭ್ಯರ್ಥಿ! ಬೆಂಗಳೂರು, ಏ.20, 2024 : (.. ) ಆಂಧ್ರಪ್ರದೇಶದ ದರ್ಸಿ ವಿಧಾನಸಭಾ ಕ್ಷೇತ್ರದ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಭ್ಯರ್ಥಿ ಗೊಟ್ಟಿಪತಿ ಲಕ್ಷ್ಮಿ, ಗರ್ಭಿಣಿ ಜೀವ ಉಳಿಸುವ ನಿಟ್ಟಿನಲ್ಲಿ ಅಗತ್ಯ ಶಸ್ತ್ರಚಿಕಿತ್ಸೆ ಮಾಡಲು ತಮ್ಮ ಚುನಾವಣಾ ಪ್ರಚಾರವನ್ನು ಅರ್ಧದಲ್ಲೇ ಬಿಟ್ಟು ತೆರಳಿದ ಘಟನೆ ನಡೆದಿದೆ. ಸ್ತ್ರೀರೋಗ ತಜ್ಞೆಯಾಗಿರುವ ಡಾ.ಲಕ್ಷ್ಮಿ ಅವರು ದರ್ಶಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾಗ ಸಮೀಪದ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಅವರು ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಿ ಸ್ವಲ್ಪ ಸಮಯದಲ್ಲೇ ಆಸ್ಪತ್ರೆ ತಲುಪಿದರು. ನಂತರ ಗರ್ಭಿಣಿಗೆ ಸಿಸೇರಿಯನ್ ಮಾಡಿ ಜೀವ ಉಳಿಸಿದ್ದಾಳೆ. ಈಗ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಪಕ್ಷದ ಅಭ್ಯರ್ಥಿ ಈ ನಡೆಯನ್ನು ತೆಲುಗು ದೇಶಂ ಪಕ್ಷ ಶ್ಲಾಘಿಸಿದೆ. ಡಾ ಲಕ್ಷ್ಮಿ ಅವರು ನವಜಾತ ಶಿಶುವನ್ನು ಹಿಡಿದಿರುವ ವೀಡಿಯೊವನ್ನು ಪೋಸ್ಟ್ ಮಾಡಿದೆ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕೂಡ ಡಾ ಲಕ್ಷ್ಮಿ ಅವರನ್ನು ಅಭಿನಂದಿಸಿದರು ಮತ್ತು “ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ. ಆಂಧ್ರಪ್ರದೇಶ ಮುಂಬರುವ ವಿಧಾನಸಭೆ ಚುನಾವಣೆಗೆ ಮೇ 13, 2024 ರಂದು ಮತ ಚಲಾಯಿಸಲಿದ್ದು, ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ. : --, , , -, , --- , () , - . , , ’ .