ವರಿಷ್ಠರ ಆದೇಶದ ಬಳಿಕವೇ ಸಂಪುಟ ವಿಸ್ತರಣೆ- ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಎಂ ಬಿಎಸ್ ವೈ ಸ್ಪಷ್ಟನೆ.. ಚಾಮರಾಜನಗರ,ನವೆಂಬರ್,25,2020(..):ಪಕ್ಷದ ಹೈಕಮಾಂಡ್ ಆದೇಶ ಬಂದ ಬಳಿಕವಷ್ಟೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಮಲೈಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾದಪ್ಪನ ದರ್ಶನ ಪಡೆದರು. ಆದರೇ ದೇವಸ್ಥಾನದ ಪ್ರಸಾದ ಸ್ವೀಕರಿಸಲಿಲ್ಲ ಎನ್ನಲಾಗಿದೆ. ಮಾದಪ್ಪನ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ವರಿಷ್ಟರು ಸೂಚನೆ ನೀಡಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ. ಇನ್ನು ಸಂಸದ ಶ್ರೀನಿವಾಸ್ ಪ್ರಸಾದ್ ಬೇಸರದ ಬಗ್ಗೆ ಅವರನ್ನ ಕರೆದು ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದರು. : - --