ಇನ್ನು ನಾಲ್ಕು ವಾರದಲ್ಲಿ ಕೊರೋನಾಗೆ ಲಸಿಕೆ ಬರಬಹುದು-ಮೈಸೂರಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ… ಮೈಸೂರು,ನವೆಂಬರ್,24,2020(..):ಇನ್ನು ನಾಲ್ಕು ವಾರದಲ್ಲಿ ಕೊರೋನಾಗೆ ಲಸಿಕೆ ಬರಬಹುದು. ಅದಕ್ಕಾಗಿ ಸಿದ್ದತೆ ಮಾಡಿಕೊಳ್ಳಿ ಅಂತ ಪ್ರಧಾನಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಮಾಧ್ಯಮಗಳ ಜತೆ ಮಾತನಾಡಿದರು. ಇಂದು ಪ್ರಧಾನಿ ಮೋದಿ ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಕೊರೋನಾ ಲಸಿಕೆ‌ ವಿಚಾರವಾಗಿಯೇ ಕರೆದಿದ್ದ ಸಭೆ ಅದು. ಸಭೆಯಲ್ಲಿ ಕೊರೊನಾ ಲಸಿಕೆ ನಾಲ್ಕು ವಾರದೋಳಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅದಕ್ಕಾಗಿ ಬೇಕಾದ ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಿದರು ಎಂದರು. ನಾವು ಸಹ ಜಿಲ್ಲಾಮಟ್ಟದಲ್ಲಿ ಲಸಿಕೆ ಹಂಚಲು‌ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಅದಕ್ಕೆ ಬೇಕಾದ ತಯಾರಿ ನಡೆದಿದೆ ಎಂದು ಸಿಎಂ ಯಡಿಯೂರಪ್ಪ ಮಾಹಿತಿ ನೀಡಿದರು. … 4 : , . 24, 2020 (..): “ 4 ,” .. . . “ 4 . ,” .: - . . / 4 : - - –