ಮುಂದಿನ 25 ವರ್ಷವೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ಮುನಿರತ್ನರನ್ನ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಸಚಿವ ನಾರಾಯಣಗೌಡ… ಬೆಂಗಳೂರು,ಅಕ್ಟೋಬರ್,27,2020(..):25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಆರ್ ಆರ್ ನಗರ ಜನತೆಯಲ್ಲಿ ಸಚಿವ ನಾರಾಯಣಗೌಡ ಮನವಿ ಮಾಡಿದರು. ಲಗ್ಗೆರೆ ಭಾಗದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ, ಪ್ರಧಾನಿ ನರೇಂದ್ರ ಮೋದಿಯವರಂತೆ ಸಿಎಂ ಯಡಿಯೂರಪ್ಪ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮಂಡ್ಯದ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಹಾಸನ – ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹಿಂದೆ ಕೇವಲ ಬಾಯಿಮಾತಿಗೆ ಹೇಳ್ಕೊಂಡು ಬಂದ್ರು. ಆದ್ರೆ ಅನುದಾನ ಮಾತ್ರ ಏನು ಕೊಟ್ಟಿಲ್ಲ. ಯಡಿಯೂರಪ್ಪ ಸಿಎಂ ಆದ್ಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಅದೇ ರೀತಿ ಆರ್ ಆರ್ ನಗರದ ಅಭಿವೃದ್ಧಿಗೆ ಮುನಿರತ್ನ ಅವರನ್ನ ಹೆಚ್ಚಿನ ಮತದಿಂದ ಗೆಲ್ಲಿಸಿ. ಕೆಲವೇ ದಿನಗಳಲ್ಲಿ ಮುನಿರತ್ನ ಸಚಿವರಾಗಿ ಈ ಭಾಗಕ್ಕೆ ಬರುತ್ತಾರೆ ಎಂದು ಹೇಳಿದರು. ಅಧಿಕಾರದಲ್ಲಿ ಇಲ್ಲದಿದ್ದರೂ ಮುನಿರತ್ನ ಸೇವೆ ಮಾಡುತ್ತಲೇ ಇದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರ ಸಂಕಷ್ಟಕ್ಕು ನೆರವಾಗಿದ್ದಾರೆ. ಸದಾ ಜನರ ಸಮಸ್ಯೆಗೆ ಸ್ಪಂದಿಸುವ ಮುನಿರತ್ನ ಅವರನ್ನ ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. 25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು. ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಅಭ್ಯರ್ಥಿ ಮುನಿರತ್ನ, ಬಿಜೆಪಿ ಮುಖಂಡೆ ಶೃತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. : - – – 25 - - – -