ಯೋಗಿ ಆದಿತ್ಯನಾಥ್ ಅವರಿಂದ ಕಾವಿ ಬಟ್ಟೆಗೆ ಕಳಂಕ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಮೈಸೂರು,ಅಕ್ಟೋಬರ್,26,2020(..): ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾವಿ ಬಟ್ಟೆ ಬದಲಾಯಿಸುವುದು ಒಳ್ಳೆಯದು. ಅವರಿಂದಾಗಿ ಆ ಬಟ್ಟೆಗೆ ಕಳಂಕ ಬಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 27 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು,ಅವರಿಂದ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರಕಾರದಿಂದ ಏನು ನಿರೀಕ್ಷಿಸಲು ಸಾಧ್ಯ? ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ರೈತರ ನಷ್ಟ ಭರಿಸಲಾಗದು. ನಮ್ಮ ಸರಕಾರ ಒಂದು ಹೆಕ್ಟೇರ್ ಗೆ 25ಸಾವಿರ ರೂ.ಪರಿಹಾರ ನೀಡಿತ್ತು. ಅದೇ ರೀತಿ ಕೊಡಬೇಕು. ಕಳೆದ ವರ್ಷದ ಪ್ರವಾಹದ ಹಾನಿಗೆ ಇಲ್ಲಿಯವರೆಗೆ ಪರಿಹಾರ ನೀಡದ ರಾಜ್ಯ ಸರಕಾರದಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಟ್ವಿಟರ್ ನಲ್ಲಿ ಅಸಮಧಾನವ್ಯಕ್ತಪಡಿಸಿದ್ದಾರೆ. : - - --