ಡಿ.ಕೆ.ಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಕಿಡಿ ಮೈಸೂರು,ಅಕ್ಟೋಬರ್,25,2020(..): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಅವರೇ ಡಿಕೆಶಿ ಮಾತಿಗೆ ಬೆಲೆ ಕೊಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಿಡಿಕಾರಿದರು. ಡಿಕೆಶಿ ಅವರು ತಾಯಿಗೆ ಮೋಸ ಮಾಡಿ ಹೋದವರೆಂದು ನೀಡಿರುವ ಹೇಳಿಕೆಗೆ ಸಚಿವ ಎಸ್.ಟಿ.ಸೋಮಶೇಖರ್ ಆಕ್ಷೇಪವ್ಯಕ್ತಪಡಿಸಿದರು. ಕಾಂಗ್ರೆಸ್ ನಲ್ಲಿ ಶಿಸ್ತಿನ ಸಿಪಾಯಿಗಳಂತೆ ಇದ್ದವು. ನಮ್ಮನ್ನು ಕಾಂಗ್ರೆಸ್ ಪಕ್ಷ ಬಿಡಿಸಿದವರು ಯಾರು ಎಂದು ಪ್ರಶ್ನಿಸಿದ್ದಾರೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಮುನಿರತ್ನ ಸೋಲಿಸಲು ಸಾಧ್ಯವೇ ಇಲ್ಲ. ಆರ್.ಆರ್.ನಗರದಲ್ಲಿ ಶೇ.99ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಇಲ್ಲ. ಹೀಗಾಗಿ, ಹೊರಗಿನಿಂದ ಜನರನ್ನು ಕರೆತಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು. : ’------ .. -