ರೋಡ್ ಶೋ : ಆಂಧ್ರ ಸಿಎಂ ಜಗನ್ ರೆಡ್ಡಿ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು ವಿಜಯವಾಡ, ಏ.14, 2024 : (.. ) ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶನಿವಾರ ರೋಡ್ ಶೋ ವೇಳೆ ಪ್ರಕ್ಷುಬ್ಧ ಘಟನೆ ಎದುರಿಸಿದರು. ಅಪರಿಚಿತ ವ್ಯಕ್ತಿಗಳು ಎಸೆದ ಕಲ್ಲು ಅವರಿಗೆ ಬಡಿದು ಸಣ್ಣಪುಟ್ಟ ಗಾಯಗಳಾಗಿವೆ. ವಿಜಯವಾಡದ ಸಿಂಗ್ ನಗರದಲ್ಲಿ ಬೆಂಬಲಿಗರೊಂದಿಗೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ‘ಮೇಮಂತ ಸಿದ್ದಂ ಬಸ್ ಯಾತ್ರೆ’ ಪ್ರಚಾರದ ಮಧ್ಯೆ ಈ ಘಟನೆ ನಡೆದಿದೆ. ಮುಖ್ಯಮಂತ್ರಿ ಜಗನ್‌ ಅವರ ಎಡಭಾಗದ ಕಣ್ಣಿನ ಮೇಲ್ಭಾಗದಲ್ಲಿ ಸಣ್ಣ ಗಾಯವಾಗಿದ್ದು, ಪ್ರಚಾರದ ವೇಳೆ ಅವರ ಜೊತೆಗಿದ್ದ ಶಾಸಕ ವೆಲ್ಲಂಪಲ್ಲಿ ಶ್ರೀನಿವಾಸ ರಾವ್ ಅವರಿಗೂ ಗಾಯಗಳಾಗಿವೆ. ಈ ಘಟನೆಯ ಬಳಿಕ ಜಗನ್ ಮೋಹನ್ ರೆಡ್ಡಿ ಬಸ್‌ನಲ್ಲಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆದರು ಮತ್ತು ಧೈರ್ಯದಿಂದ ತಮ್ಮ ನಿಗದಿತ ರೋಡ್‌ಶೋ ಮುಂದುವರೆಸಿದರು. ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹೊರಡಿಸಿದ ಹೇಳಿಕೆಯಲ್ಲಿ, ಜಗನ್ ಮೋಹನ್ ರೆಡ್ಡಿ ಅವರು ಮಾರ್ಗದಲ್ಲಿ ಜಮಾಯಿಸಿದ ಜನಸಮೂಹದ ಬಳಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವಿವರಿಸಲಾಗಿದೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡರು, ತೆಲುಗು ದೇಶಂ ಪಕ್ಷಕ್ಕೆ ಸೇರಿದ ಕಾರ್ಯಕರ್ತರೇ ಘಟನೆಗೆ ಕಾರಣ ಎಂದು ಆರೋಪಿಸಿದ್ದು, ಅವರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಮೇಲಿನ ಹಲ್ಲೆಗೆ ರಾಷ್ಟ್ರದಾದ್ಯಂತ ರಾಜಕೀಯ ನಾಯಕರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ, “ಗೌರವಾನ್ವಿತ ಆಂಧ್ರಪ್ರದೇಶ ಸಿಎಂ ತಿರು @ ಯಸ್‌ಜಗನ್ ಅವರ ಮೇಲೆ ಕಲ್ಲು ತೂರಾಟವನ್ನು ನಾನು ಖಂಡಿಸುತ್ತೇನೆ. ರಾಜಕೀಯ ಭಿನ್ನಾಭಿಪ್ರಾಯಗಳು ಎಂದಿಗೂ ಹಿಂಸಾಚಾರಕ್ಕೆ ಹೋಗಬಾರದು. ನಾವು ಸಭ್ಯತೆಯನ್ನು ಎತ್ತಿ ಹಿಡಿಯೋಣ ಮತ್ತು ನಾವು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ತೊಡಗಿರುವಾಗ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದಿದ್ದಾರೆ. : , , , , . ಕೃಪೆ : ಇಂಡಿಯಾ ಟುಡೆ : , , . ‘ ’ , , .