ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ.ದೇಣಿಗೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆಂಗಳೂರು,ಅಕ್ಟೋಬರ್,20,2020(..): ಹೈದರಾಬಾದ್ ನಲ್ಲಿ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಂದರ್ಭವನ್ನು ನಿಭಾಯಿಸುವ ಸಲುವಾಗಿ ದೆಹಲಿ ಸರ್ಕಾರವು ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ. ದೇಣಿಗೆ ನೀಡುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ದೆಹಲಿಯ ಜನರು ನಮ್ಮ ಸಹೋದರ ಸಹೋದರಿಯರೊಂದಿಗೆ ಹೈದರಾಬಾದ್‌ನಲ್ಲಿ ನಿಂತಿದ್ದಾರೆ. ಹೈದರಾಬಾದ್‌ನಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ, ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಪರಿಹಾರ ಕಾರ್ಯಗಳಿಗಾಗಿ ದೆಹಲಿ ಸರ್ಕಾರ ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ. ದೇಣಿಗೆ ನೀಡಲಿದೆ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ. : 15 ---- -