ಎಂಎಲ್ ಸಿ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ ಶಿವಮೊಗ್ಗ,ಅಕ್ಟೋಬರ್,18,2020(..): ಕಾಂಗ್ರೆಸ್‌ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ನನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ.ಪ್ರಸನ್ನ ಕುಮಾರ್ ಗೆ ಇಬ್ಬರು ಮಕ್ಕಳು ಸೂರಜ್ ಹಾಗೂ ಸುಹಾಸ್. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಕುಟುಂಬದ ವ್ಯವಹಾರ ನೋಡಿಕೊಳ್ಳುತ್ತಿದ್ದ ಸುಹಾಸ್ ಸರಳ ಸ್ನೇಹಜೀವಿಯಾಗಿದ್ದರು ಎಂದು ತಿಳಿದು ಬಂದಿದೆ. : -- .--