ಸಿಬಿಐ ಈಗ ‘ಚೋರ್ ಬಚಾವ್ ಇನ್ವೆಸ್ಟಿಗೇಷನ್’ : ಬಿಜೆಪಿಯವರ ಮನೆ ಮೇಲೆ ದಾಳಿ ಮಾಡುವಂತೆ ಚಾಲೆಂಜ್ ಹಾಕಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್.. ಮೈಸೂರು,ಅಕ್ಟೋಬರ್,6,2020(..):ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿದ ಸಿಬಿಐಗೆ ಚೋರ್ ಬಚಾವ್ ಇನ್ವೆಸ್ಟಿಗೇಷನ್ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೊಸ ವ್ಯಾಖ್ಯಾನ ನೀಡಿದ್ದಾರೆ. ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಬಿಜೆಪಿಯವರ ಮನೆಗಳ ಮೇಲೆ ಸಿಬಿಐ ದಾಳಿ ಮಾಡಲಿ. ಕೋಟಿ ಕೋಟಿ ಹಣ ಸಿಗದಿದದ್ದರೆ ಕೇಳಿ ಎಂದು ಸಿಬಿಐಗೆ ಚಾಲೆಂಜ್ ಹಾಕಿದರು. ಹಾಗೆಯೇ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ. ಸಿಬಿಐ ಇದೀಗ ಚೋರ್ ಬಚಾವ್ ಇನ್ವೆಸ್ಟಿಗೇಷನ್ ಆಗಿದೆ. ಕೇಂದ್ರ ಬಿಜೆಪಿ ಸರ್ಕಾರ ಐಟಿ, ಸಿಬಿಐ, ಇಡಿ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಕಾರ್ಯ ಮಾಡುತ್ತಿದೆ. ಡಿ.ಕೆ. ಶಿವಕುಮಾರ್ ಓರ್ವ ಉದ್ಯಮಿಯೂ ಸಹ ಹೌದು. ಹೀ ಇಸ್ ಎ ರಿಯಲ್ ಎಸ್ಟೇಟ್ ಡೆವಲಪರ್. ಅವರ ಮಾಲೀಕತ್ವದಲ್ಲಿ ಹಲವಾರು ಪವರ್ ಪ್ಲಾಂಟ್ ಉದ್ದಿಮೆಗಳು, ಶೈಕ್ಷಣಿಕ ಸಂಸ್ಥೆಗಳಿವೆ. ಅವುಗಳ ಮೂಲಕ ಡಿಕೆಶಿಯವರು ಆದಾಯ ಗಳಿಸುತ್ತಿದ್ದಾರೆ. ಈ ಆದಾಯದ ಮೂಲವನ್ನು ತನಿಖೆ ಮಾಡುವ ಅಧಿಕಾರ ಸಿಬಿಐಗೆ ಇರುವುದಿಲ್ಲ. ಈಗಾಗಲೇ ಅವರ ಆಸ್ತಿ ಗಳಿಕೆ ಪ್ರಕರಣನ್ನು ಇಡಿ ನಿರ್ವಹಿಸುತ್ತಿದೆ ಎಂದು ಹೇಳಿದರು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ದಾಳಿ ನಡೆಸುಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ವರ್ಚಸ್ಸು ಕಂಡು ಹೆದರಿ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಚ ರಾಜಕೀಯ ಮಾಡುತ್ತಿದೆ. ನಾನು ಈಗಲೂ ಚಾಲೆಂಜ್ ಮಾಡುತ್ತೇನೆ. ಬಿಜೆಪಿಯವರ ಮನೆಗಳ ಮೇಲೆ ಸಿಬಿಐ ದಾಳಿ ಮಾಡಲಿ. ಕೋಟಿ ಕೋಟಿ ಹಣ ಸಿಗದಿದದ್ದರೆ ಕೇಳಿ ಎಂದು ಸಿಬಿಐ ಮೇಲೆ ಎಂ ಲಕ್ಷ್ಮಣ್ ಸವಾಲು ಹಾಕಿ ಸಿಬಿಐ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಹರಿಹಾಯ್ದ ರು. : –- - -- –. –