ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಕ್ಷಣಗಣನೆ… ಲಖನೌ, ಸೆಪ್ಟಂಬರ್.30,2020(..):ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ಪ್ರಕಟವಾಗಲಿದೆ. ಲಖನೌ ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಲಿದ್ದು ಎಲ್ಲರ ಚಿತ್ತ ತೀರ್ಪಿನ ಮೇಲಿದೆ. ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಪ್ರಮುಖ ಆರೋಪಿಗಳಾಗಿದ್ದು ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟವಾಗಲಿದ್ದು, ಈ ಮಧ್ಯೆ ಎಲ್ಲಾ 32 ಆರೋಪಿಗಳು ಖುದ್ದು ಹಾಜರಿರಬೇಕೆಂದು ನ್ಯಾಯಾಲಯ ತಿಳಿಸಿದೆ. ಸಿಸಿಬಿ ವಿಶೇಷ ಕೋರ್ಟ್​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ. : - –- - -