ವರನ ವೇಶಧರಿಸಿ ಕತ್ತೆಯ ಮೇಲೆ ಮೆರವಣಿಗೆ : ವಾಟಾಳ್ ನಾಗರಾಜ್ ಅವರಿಂದ ವಿಭಿನ್ನ ಪ್ರತಿಭಟನೆ ಬೆಂಗಳೂರು,ಸೆಪ್ಟೆಂಬರ್,28,2020(..): ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕತ್ತೆಯನ್ನು ವರನ ವೇಶಧರಿಸಿ ಮೆರವಣಿಗೆ ನಡೆಸುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.ರೈತ ವಿರೋಧಿ ಮಸೂಧೆಗಳ ವಿರುದ್ಧ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ಅದರಂತೆ ಇಂದು ಮೆಜೆಸ್ಟಿಕ್ ಬಳಿ ತಮ್ಮ ಹೋರಾಟಗಾರರ ಸಹಾಯದೊಂದಿಗೆ ವರನಂತೆ ವಸ್ತ್ರಧರಿಸಿ ಕತ್ತೆಯ ಮೇಲೆ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಖಂಡಿಸಿದ್ದಾರೆ. : -----