ಸರ್ವಾಧಿಕಾರಿ ಮನೋಭಾವ ಬಿಡಲೇಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದ್ದು ಯಾರಿಗೆ? ಹಾಸನ,ಸೆಪ್ಟೆಂಬರ್,19,2020(..): ಮಾಜಿ ಸಚಿವ ಎಚ್.ಡಿ.ರೇವಣ್ಣ ಸರ್ವಾಧಿಕಾರ ಮನೋಭಾವವನ್ನು ಬಿಡಲೇಬೇಕು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ಕೆಲವು ವಿದ್ಯಮಾನಗಳು ನನ್ನನ್ನು ಘಾಸಿಗೊಳಿಸಿವೆ. ಹೀಗಾದರೆ ಪಕ್ಷ ಸಂಘಟನೆ ಕಾರ್ಯ ಸಾಧ್ಯವಿಲ್ಲ. ಹೀಗಾಗಿ ರೇವಣ್ಣ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ತಮ್ಮ ಪಕ್ಷದ ಶಾಸಕರ ವಿರುದ್ಧವೇ ಬಹಿರಂಗವಾಗಿ ಆಕ್ರೋಶಹೊರಹಾಕಿರುವುದು ತಿಳಿದು ಬಂದಿದೆ. : -- ..-,?